200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು, ಪರೀಕ್ಷಾ ಕೇಂದ್ರದ ಹತ್ತಿರವಿರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ರಕ್ಷಣೆ ಒದಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು, ಈ ಕುರಿತು ಅಗತ್ಯ ಕ್ರಮ ಜರುಗಿಸಲಾಗಿದೆ.
ಪರೀಕ್ಷೆಗಳು ಸುಗಮವಾಗಿ ನಡೆಯಲು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಓ, ಉಪನಿರ್ದೇಶಕರ ನೇತೃತ್ವದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣಾ ದಳಗಳು ಕಾರ್ಯನಿರ್ವಹಿಸಲಿವೆ.
ಜಿಲ್ಲಾ ಹಂತದಲ್ಲಿ ಡಯಟ್ ನಿಂದ ಅಂತರ್ ಜಿಲ್ಲಾ ವಿಚಕ್ಷಣಾ ದಳಗಳು ಮತ್ತು ತಾಲೂಕಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೂಒಬ್ಬ ಸ್ಥಾನಿಕ ಜಾಗೃತ ದಳದವರನ್ನು ನೇಮಿಸಲಾಗಿದೆ. ದಾಂಡೇಲಿ ಕಂದಾಯ ತಾಲೂಕನ್ನು ರಚಿಸಲಾಗಿದ್ದು ಅದನ್ನು ಯಾವುದೇ ಶೈಕ್ಷಣಿಕ ಜಿಲ್ಲೆಯಲ್ಲಿ ಸೇರ್ಪಡೆ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಹಳಿಯಾಳ ತಾಲೂಕು ವ್ಯಾಪ್ತಿಯಲ್ಲಿ ಮುಂದುವರಿದಿದೆ.
Leave a Comment