ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ಅಗತ್ಯ: ಮುಖ್ಯಮಂತ್ರಿ ಯಡಿಯೂರಪ್ಪ

December 25, 2019
8:32 PM

ಉಡುಪಿ: ಇಂದಿನ ಮಕ್ಕಳು ಸತ್ಪ್ರಜೆಗಳಾಗಳು ಸಂಸ್ಕಾರಯುತ ಶಿಕ್ಷಣವು ಅತೀ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement

ಅವರು ಉಡುಪಿ ಶ್ರೀ ಕೃಷ್ಣ ಮಠ ಆವರಣದಲ್ಲಿ ಚಿಣ್ಣರ ಮಾಸೋತ್ಸವ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ಎಂ.ಆರ್.ಪಿ.ಎಲ್. ಸಂಸ್ಥೆಯ ರೂ. 2 ಕೋಟಿ ಅನುದಾನದಿಂದ ನಿರ್ಮಾಣಗೊಂಡಿರುವ ಶೌಚಾಲಯ ಸಮುಚ್ಚಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಭತ್ತವನ್ನು ತುಂಬುವ ಚೀಲಗಳಾಗದೆ ಭತ್ತವನ್ನು ಬೆಳೆಯುವ ಗದ್ದೆಗಳಾಗಬೇಕು ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು. ಮಕ್ಕಳು ಶುದ್ಧ ಪರಿಸರದಲ್ಲಿ ಆರೋಗ್ಯಯುತರಾಗಿ ಬಾಳಬೇಕು. ಉಡುಪಿ ಕೃಷ್ಣ ಮಠವು ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisement

ರಾಜ್ಯ ಸರಕಾರ ಬಿಸಿಯೂಟ ಯೋಜನೆ ಜಾರಿಗೆ ತರುವ ಮೊದಲೇ ಕೃಷ್ಣ ಮಠವು ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ, ಸುಮಾರು 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿನಿತ್ಯ ಬಿಸಿಯೂಟ ಮಾಡುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಚ್ಛ ಭಾರತ ಯೊಜನೆಗೆ ಕೃಷ್ಣ ಮಠದ ಕೊಡುಗೆ ಅಪಾರವಾಗಿದೆ. ಇದು ದೇಶಕ್ಕೆ ಮಾದರಿ ಎಂದು ಮುಖ್ಯಮಂತ್ರಿ ನುಡಿದರು.

ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಜಗದೀಶ್, ಎಂ.ಆರ್.ಪಿ.ಎಲ್. ಸಂಸ್ಥೆಯ ಅಧಿಕಾರಿ ವೆಂಕಟೇಶ್ ಮತ್ತಿತರರು ಇದ್ದರು.

Advertisement

ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ | ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ |
June 12, 2024
1:36 PM
by: The Rural Mirror ಸುದ್ದಿಜಾಲ
ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |
June 12, 2024
1:23 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಜಾಗಗಳ ರಕ್ಷಣೆಗಾಗಿ ಕ್ರಮ | ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಲ್ಯಾಂಡ್ ಬೀಟ್ ಮತ್ತು ಆಧಾರ್ ಲಿಂಕ್ ಕಾರ್ಯ|
June 12, 2024
1:04 PM
by: The Rural Mirror ಸುದ್ದಿಜಾಲ
ವಿದ್ಯುತ್ ಸ್ಪರ್ಶದಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಸಾವು | ತನಿಖೆಗೆ ಅರಣ್ಯ ಸಚಿವ ಖಂಡ್ರೆ ಸೂಚನೆ
June 12, 2024
12:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror