DAKSHINA KANNADA
ಕಾಂಗ್ರೆಸ್ ಸದಸ್ಯೆಯ ಮಾನಭಂಗ ಯತ್ನ ಪ್ರಕರಣ: ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷನಿಗೆ ಜೈಲು
ಸುಳ್ಯ: 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಮೇಲೆ,
ನಡೆಸಲಾದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಅವರ ಮೇಲೆ ನಡೆಸಲಾದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಹೊರಬಂದಿದ್ದು, ಹರೀಶ್ ಕಂಜಿಪಿಲಿ ಮತ್ತವರ ತಂಡಕ್ಕೆ ಶಿಕ್ಷೆ ನಿಗದಿಯಾಗಿದೆ.
2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಅವರ ಮೇಲೆ ಹಲ್ಲೆ ಮತ್ತು ಮಾನಭಂಗ ಮಾಡಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಭಾರತೀಯ ದಂಡ ಸಂಹಿತೆ 143 ಜತೆಗೆ 149 ರ ಅಪರಾಧಕ್ಕೆ 1 ವರ್ಷ ಕಾರಾಗೃಹ ವಾಸ, ಸೆಕ್ಷನ್ 147 ಜತೆಗೆ 149 ರ. ಅಪರಾಧಕ್ಕೆ 1 ವರ್ಷ ಕಾರಾಗೃಹ ವಾಸ ಮತ್ತು 3 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1ತಿಂಗಳ ಸೆರೆವಾಸ, ಸೆಕ್ಷನ್ 341 ರ ಅಪರಾಧಕ್ಕೆ ಹದಿನೈದು ದಿನಗಳ ಕಾರಾಗೃಹ ವಾಸ ಮತ್ತು 500 ರೂ. ದಂಡ,
ದಂಡ ತೆರಲು ತಪ್ಪಿದಲ್ಲಿ 1 ವಾರ ಜೈಲು, ಸೆಕ್ಷನ್ 504 ಜತೆಗೆ 149 ರ ಅಪರಾಧಕ್ಕೆ 1 ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 15 ದಿನ ಕಾರಾಗೃಹವಾಸ , ಸೆಕ್ಷನ್ 506 ಜತೆಗೆ 149 ರ ಅಪರಾಧಕ್ಕೆ 1 ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ,
ದಂಡ ತೆರಲು ತಪ್ಪಿದಲ್ಲಿ 15 ದಿನ ಕಾರಾಗೃಹವಾಸ, ಸೆಕ್ಷನ್ 354 ಜೊತೆಗೆ 149 ರ ಅಪರಾಧಕ್ಕೆ 2 ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಇದಲ್ಲದೆ ಎಲ್ಲಾ ಹದಿನೈದು ಮಂದಿ ಆರೋಪಿಗಳು ತಲಾ ರೂ. 3750 ರಂತೆ 50 ಸಾವಿರ ರೂ. ಪರಿಹಾರವನ್ನು ನೊಂದ ಮಹಿಳೆಗೆ ನೀಡಬೇಕೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.
DAKSHINA KANNADA
ಲವ್ ಜಿಹಾದ್ ತಡೆಯಲು ಶ್ರೀರಾಮ ಸೇನೆಯಿಂದ ಹೆಲ್ಪ್ ಲೈನ್
ಮಂಗಳೂರು: ಲವ್ ಜಿಹಾದ್ ತಡೆಯಲು ಶ್ರೀರಾಮ ಸೇನೆಯ ಕರ್ನಾಟಕ ರಾಜ್ಯ ಘಟಕವು ಸಹಾಯವಾಣಿ ವ್ಯವಸ್ಥೆಯನ್ನು ಇಂದಿನಿಂದ ಕಾರ್ಯಾರಂಭಗೊಳಿಸಿದೆ. ಮೇ.29ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ರವರು ಈ ಬಗ್ಗೆ ಮಾಹಿತಿ ನೀಡಿದರು.
ಹಿಂದೂ ಯುವತಿಯರ ರಕ್ಷಣೆ ಈ ಸಹಾಯವಾಣಿ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ. ಕರ್ನಾಟಕದ ಮಂಗಳೂರು, ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ದಾವಣಗೆರೆ, ಬಾಗಲಕೋಟೆ ಎಂಬ 6 ಕಡೆ ಏಕಕಾಲದಲ್ಲಿ ಹೆಲ್ಪ್ ಲೈನ್ ಕಾರ್ಯಾರಂಭಗೊಂಡಿದೆ. ಹುಬ್ಬಳ್ಳಿಯಲ್ಲಿ ಈ ಸಹಾಯವಾಣಿಯ ಕೇದ್ರ ಇರುತ್ತದೆ ಎಂದು ತಿಳಿಸಿದರು.
Read More..;ಕಾಂಗ್ರೆಸ್ ಅಭ್ಯರ್ಥಿಯ ಕರಪತ್ರದಲ್ಲಿ ಬಿಜೆಪಿ ನಾಯಕನ ಫೋಟೋ! ನಗೆಪಾಟಲಿಗೀಡಾದ ಕಾಂಗ್ರೆಸ್
ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದಾಗಿದ್ದು, ಆಧಾರ ಸಹಿತವಾಗಿ ಕರೆ ಮಾಡಬೇಕು. ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುವುದು. ಲವ್ ಜಿಹಾದ್ ಕೆರಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ. ಕರೆಗಳ ಸತ್ಯಾಸತ್ಯತೆ ತಿಳಿದು ಬಳಿಕ ಮುಂದಿನ ಹೆಜ್ಜೆ ಇರಿಸಲಾಗುವುದು. ಕಾನೂನು ಮೀರುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿಯೇ ಹೆಲ್ಪ್ ಲೈನ್ ಕಾರ್ಯಾಚರಿಸಲಿದೆ. ಸಹಾಯವಾಣಿ ವ್ಯವಸ್ಥೆಯ ನಿರ್ವಹಣೆಯಲ್ಲಿ ವಕೀಲರ ತಂಡ, ಮಾಜಿ ಪೊಲೀಸ್ ಅಧಿಕಾರಿಗಳು, ಮಹಿಳೆಯರು ಇರುತ್ತಾರೆ. ಕಾನೂನು ಸಲಹೆಯನ್ನು ನೀಡಲಾಗುತ್ತದೆ ಎಂದರು. ಲವ್ ಜಿಹಾದ್ ಗೆ ಸಂಬಂಧಿಸಿ ಉತ್ತರ ಭಾರತದಲ್ಲಿ 2022- 23 ರಲ್ಲಿ 153 ಹಿಂದು ಯುವತಿಯರ ಕೊಲೆಯಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ಮಂಗಳೂರು/ ಉಡುಪಿ ವಿಭಾಗದ ಅಧ್ಯಕ್ಷ ಮಧುಸೂದನ್ ಉರ್ವಸ್ಟೋರ್, ಉಡುಪಿ ಜಿಲ್ಲಾಧ್ಯಕ್ಷ ಜಯರಾಮ್ ಅಂಬೆಕಲ್ಲು, ಮಂಗಳೂರು ಕಾರ್ಯಾಧ್ಯಕ್ಷ ಅರುಣ್ ಕದ್ರಿ, ಸುದರ್ಶನ್ ಪೂಜಾರೆ, ಹೇಮಂತ ಜಾನಕೆರೆ ಅವರು ಉಪಸ್ಥಿತರಿದ್ದರು.
ಈ ಸಹಾಯವಾಣಿಯ ನಂಬರ್ 9090443444
DAKSHINA KANNADA
ಸತ್ಯವಾದ ದೈವದ ನುಡಿ… ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿ
ಉಡುಪಿ: ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಡ್ರ್ಯಾಗರ್ ನಿಂದ ಚುಚ್ಚಿ ಶರತ್ ಶೆಟ್ಟಿಯನ್ನು ಕೊಲೆಗೈದ ಆರೋಪಿ ಇದೀಗ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಹಿಂದೆ ದೈವ ನೀಡಿದ್ದ ಕಾರ್ಣಿಕದ ನುಡಿ ಸತ್ಯವಾಯಿತಾ ಎಂಬ ಮಾತು ಕೇಳಿ ಬರುತ್ತಿದೆ. ಶರತ್ ಶೆಟ್ಟಿ ಹತ್ಯೆ ನಡೆದು ದಿನಗಳು ಕಳೆದರೂ ಕೊಲೆ ಆರೋಪಿಯ ಪತ್ತೆಯಾಗದೇ ಇದ್ದಾಗ ಕುಟುಂಬದವರು ದೈವದ ಮೊರೆ ಹೋಗಿದ್ದರು. ಈ ವೇಳೆ ‘ಕೊಲೆಗಾರ ಎಲ್ಲೇ ಇದ್ದರೂ ತಂದು ನಿಲ್ಲಿಸುತ್ತೇನೆ’ ಎಂದು ದೈವ ಅಭಯ ನೀಡಿತ್ತು. ಇದೀಗ ಆರೋಪಿ ತಾನಾಗಿಯೇ ಬಂದು ನ್ಯಾಯಾಲಯಕ್ಕೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಘಟನೆ:
2023 ರ ಫೆಬ್ರವರಿ 5 ರಂದು ಉಡುಪಿಯ ಪಾಂಗಳ ಪಡುವಿನಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದುರ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಾದ್ರೂ ಆರೋಪಿಗಳು ಯಾರು ಅನ್ನೋದು ಪತ್ತೆಯಾಗಿರಲಿಲ್ಲ. ಇದರಿಂದ ಬೇಸತ್ತ ಕುಟುಂಬಸ್ಥರು ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿಗೆ ನೇಮೋತ್ಸವವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ದೈವ ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ ಎಂದು ಅಭಯ ನೀಡಿತ್ತು.
Read More..; ಪಾಂಗಳ ಶರತ್ ಶೆಟ್ಟಿ ಕೊಲೆ ಪ್ರಕರಣ-ನಾಲ್ವರ ಬಂಧನ: ಕಲಿ ಯೋಗೀಶ ಸೇರಿ ಹಲವರಿಗೆ ಶೋಧ
ಅದರಂತೆಯೇ ಮೇ.23ರಂದು ಪ್ರಕರಣ ಎ1 ಆರೋಪಿ ಯೋಗೀಶ್ ಆಚಾರ್ಯ ತಾನಾಗಿಯೇ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಒಂದು ವರ್ಷ ಮೂರು ತಿಂಗಳು ತಲೆಮರಿಸಿಕೊಂಡಿದ್ದ ಈತ ಉಡುಪಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿದ್ದಾರೆ.
ಶರತ್ ಶೆಟ್ಟಿ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ.30ರ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಪ್ರಕರಣದ ಪ್ರಸ್ತುದ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
DAKSHINA KANNADA
ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರಿಗೆ ನೋಟಿಸ್
ಉಡುಪಿ : ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಇದ್ದರೂ ಕೂಡಾ ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪಕ್ಷ ಅಮಾನತುಗೊಳಿಸಿ ನೋಟಿಸ್ ನೀಡಿದೆ.
ಇದೀಗ ರಘುಪತಿ ಭಟ್ ಜೊತೆ ಗುರುತಿಸಿಕೊಂಡ ಬಿಜೆಪಿ ನಾಯಕರಿಗೆ ಕೂಡ ನೋಟಿಸ್ ಜಾರಿ ಮಾಡಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಜೊತೆಗೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮ ಕೈಗೊಳ್ಳುವ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ : ಎಸ್ಐಟಿಯಿಂದ ಪ್ರಜ್ವಲ್ ನಿವಾಸ ಪರಿಶೀಲನೆ..! ಹಾಸಿಗೆ, ದಿಂಬು ವಶಕ್ಕೆ ಪಡೆದ ತನಿಖಾ ತಂಡ
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ್ ಠಾಕೂರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪೇಂದ್ರ ನಾಯಕ್, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ರೋಶನ್ ಶೆಟ್ಟಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಅವರು ಪಕ್ಷದ ಜವಾಬ್ದಾರಿ ಹೊಂದಿದ್ದರು, ಆದರೆ ಅವರು ಇದೀಗ ಭಟ್ ಜೊತೆ ಸೇರಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಅಕ್ಷಮ್ಯವಾಗಿದೆ. ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದ ಕಾರಣಕ್ಕೆ 48 ಗಂಟೆಗಳ ಒಳಗೆ ಸ್ಪಷ್ಟನೆ ನೀಡಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ನೀಡಲಾಗಿದೆ.
- LATEST NEWS7 days ago
ತಾಯಿಯನ್ನು ಮನೆಯಿಂದ ಹೊರಹಾಕಿದ್ದ ಮಗ-ಸೊಸೆ..! ತಹಶೀಲ್ದಾರ್ ನೆರವಿನಿಂದ ತಾಯಿ ಮರಳಿ ಮನೆಗೆ..!
- DAKSHINA KANNADA5 days ago
ಪುತ್ತೂರು : ರಸ್ತೆ ಅಪಘಾ*ತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃ*ತ್ಯು
- DAKSHINA KANNADA5 days ago
ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್
- DAKSHINA KANNADA7 days ago
ಊಟವಾದ ನಂತರ ನಿದ್ರೆ ಬರುತ್ತದೆಯೇ..? ಈ ರೀತಿ ಮಾಡಿ ನೋಡಿ