Connect with us

DAKSHINA KANNADA

ಸುಳ್ಯದ ಹಾಸ್ಟೆಲ್‌ಗೆ ಪೊಲೀಸ್ ರೈಡ್: 11 ಕೆ.ಜಿ ಗಾಂಜಾ ಪತ್ತೆ-ಓರ್ವ ಪರಾರಿ

Published

on

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ.

ಸಾಂದರ್ಭಿಕ ಚಿತ್ರ

ಮೊಯ್ದಿನ್ ಕುಂಞ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಕೊಠಡಿ ಬಾಡಿಗೆ ಪಡೆದು ತನ್ನ ಕುಟುಂಬದೊಂದಿಗೆ ಆಶ್ರಯ ಹೂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು. ತಪಾಸಣೆ ಮಾಡುವ ವೇಳೆ 11 ಕೆ.ಜಿ. ಗಾಂಜಾ ಪತ್ತೆಯಾಗಿದೆ.

ಈ ವೇಳೆ ಮನೆಯೊಳಗಿದ್ದ ಮೊಯ್ದಿನ್ ಕುಂಞಿ ಪರಾರಿಯಾಗಿದ್ದು, ಸಲಾಹುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊಯ್ದೀನ್ ಕುಂಞಿಯ ಕಾರನ್ನು ಕೂಡಾ ವಶಕ್ಕೆ ಪಡೆದಿದ್ದು ಅದರಲ್ಲಿ ಕೂಡಾ 1 1 ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅಬಕಾರಿ ಉಪಾಧೀಕ್ಷಕ ಶಿವಪ್ರಸಾದ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ ಪೈ, ಸುಳ್ಯ ಅಬಕಾರಿ ನಿರೀಕ್ಷಕಿ ರಾಧಾ, ಸಿಬ್ಬಂದಿ ವಿಜಯಕುಮಾರ್,

ಪ್ರೇಮಾನಂದ, ಯಲ್ಲಪ್ಪ, ಪ್ರಶಾಂತ್, ಶರಣಪ್ಪ, ಅಮರೇಶ್, ಅಶೋಕ್, ಶರತ್, ತಿಪ್ಪೇಸ್ವಾಮಿ, ನೀಲಾಧರ ಮತ್ತಿತರರು ಕಾರ್ಯಾಚರಣೆ ನಡೆಸಿದರು

DAKSHINA KANNADA

ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!

Published

on

ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ 2000 ರೂ. ನೇರವಾಗಿ ಕೃಷಿಗರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಇದೀಗ ರೈತರು 17ನೇ ಕಂತಿನ ನಿರೀಕ್ಷೆಯಲ್ಲಿದ್ದು, ಮೇ.2024ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.  ಆದರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ.

16ನೇ ಕಂತನ್ನು ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್‌ ನಿಧಿ ಯೋಜನೆಯ ಕಂತನ್ನು ರೈತರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು 17ನೇ ಕಂತಿಗಾಗಿ ಕಾದು ನೋಡಬೇಕಿದೆ. ಈ ಯೋಜನೆಯ ಕಂತುಗಳನ್ನು ವರ್ಷದಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಮೊದಲನೆಯ ಕಂತು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್‌ನಲ್ಲಿ ನೀಡಲಾಗುತ್ತದೆ.

ಮುಂದೆ ಓದಿ..; “ಮದುವೆ ಗೌನ್‌”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್‌ನಲ್ಲಿಅಭಿಮಾನಿಗಳು!

ಈಗಾಗಲೇ 16ನೇ ಕಂತನ್ನು ಫೆಬ್ರವರಿಯಲ್ಲಿ ನೀಡಿದ್ದು, 17 ನೇ ಕಂತು ಮೇ ತಿಂಗಳಿನಲ್ಲಿ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ನಿರ್ದಿಷ್ಟ ದಿನಾಂಕ ಮಾತ್ರ ನಿಗದಿಯಾಗಿಲ್ಲ.

 

 

Continue Reading

BANTWAL

ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ

Published

on

ಉಳ್ಳಾಲ :   ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.

ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:

ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

Continue Reading

BANTWAL

ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

Published

on

ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ.  ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ.

ಪವಾಡ ತೋರಿದ್ದ ಕಲ್ಲುರ್ಟಿ :

ಈಗಾಗಲೇ ತಿಳಿಸಿದಂತೆ ಈ ದೈವಸ್ಥಾನ ಹಿಂದು -ಮುಸಲ್ಮಾನ ಭಾಂದವರ ಭಾವೈಕ್ಯತೆಯ ಸಾನಿಧ್ಯ. ಕುದ್ರೆಬೆಟ್ಟುವಿನ ಒಂದು ಮುಸನ್ಮಾನ ಕುಟುಂಬ ಕಲ್ಲುರ್ಟಿ ದೈವವನ್ನು ನಂಬುತ್ತಿದ್ದರು. ಐಸಮ್ಮ ಎಂಬ ಮಹಿಳೆಯ ಕುಟುಂಬ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸುತ್ತಿದ್ದರು. ಇದರಿಂದ ಬೇಸತ್ತ ಕುಟುಂಬಕ್ಕೆ ಆ ಜಾಗದಲ್ಲಿ ಅಗೋಚರ ಶಕ್ತಿಯೊಂದು ಇರುವುದು ತಿಳಿಯುತ್ತದೆ. ನಂತರ ಅವರು ‘ಕಲ್ಲುರ್ಟಿ’ಯನ್ನು ಕಲ್ಲಿನ ರೂಪದಲ್ಲಿ ನಂಬಲು ಆರಂಭಿಸುತ್ತಾರೆ. ಕಷ್ಟ ಎಂದು ತನ್ನಲ್ಲಿಗೆ ಬಂದವರಿಗೆ ಐಸಮ್ಮ ಕಲ್ಲುರ್ಟಿಯ ಸ್ಮರಿಸಿ ಕಪ್ಪು ದಾರ ನೀಡುತ್ತಿದ್ದರು. ಇದರಿಂದ ಅವರ ತೊಂದರೆಗಳೆಲ್ಲ ನಿವಾರಣೆಯಾಗುತ್ತಿತ್ತು ಎಂಬ ನಂಬಿಕೆಯಿದೆ.

 

ಮನೆಯಲ್ಲಿ ವಿಶೇಷ ಅಡುಗೆ ಮಾಡಿದರೆ, ಆಕೆ ದೈವಕ್ಕೆ ಬಡಿಸದೇ ಸೇವಿಸುತ್ತಿರಲಿಲ್ಲ. ಒಂದುವೇಳೆ ತಪ್ಪಿದ್ದಲ್ಲಿ ಅಡುಗೆ ಮಾಡಿಟ್ಟಿದ್ದ ಪಾತ್ರೆಯೇ ದೈವದ ಕಲ್ಲಿನತ್ತ ಚಲಿಸುತ್ತಿತ್ತಂತೆ. ಆದರೆ, ಕಾಲಕ್ರಮೇಣ ಆ ಕುಟುಂಬ ಮನೆಯನ್ನು ಮಾರಿ ಬೇರೆ ಕಡೆ ಹೊರಟು ಹೋಗಿದ್ದರು.

ಮತ್ತೆ ಬೆಳಕಿಗೆ ಬಂದ ಕ್ಷೇತ್ರ :

ಆ ಮುಸಲ್ಮಾನ ಕುಟುಂಬವೇನೋ ಹೊರಟು ಹೋಯಿತು. ಶಕ್ತಿ ಅಲ್ಲೇ ಉಳಿಯಿತು. ಈ ಘಟನೆ ನಡೆದು ಹಲವು ದಶಕಗಳೇ ಕಳೆದಿವೆ. 15 ವರ್ಷಗಳಿಂದ ಇಲ್ಲಿ ಹಲವು ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮಣಿಕಂಠ ಯುವಶಕ್ತಿ ಕೇಂದ್ರ ಭಜನಾ ಮಂದಿರವೊಂದನ್ನು ಸ್ಥಾಪಿಸುವ ಕೆಲಸ ಆರಂಭಿಸಿತ್ತು. ಆದರೆ, ಇದಕ್ಕೆ ತಡೆ ಬರಲಾರಂಭಿಸಿದಾಗ, ಮಂದಿರದಲ್ಲಿ ಪ್ರಶ್ನೆ ಇಟ್ಟಾಗ ‘ಯುವಶಕ್ತಿ’ ಯ ಯುವಕರು ತಾಯಿ ಕಲ್ಲುರ್ಟಿಯನ್ನು ನಂಬಬೇಕು ಎಂಬ ಅಪ್ಪಣೆಯಾಯಿತು.

ನಾವು ಬಿಟ್ಟೆವೆಂದು ದೈವ ಬಿಡುವುದೇ..? ಪೂ – ನೀರ್(ಹೂ-ನೀರು) ಸಲ್ಲದೇ ಹೋದಲ್ಲಿ ಹೇಗೆ? ಅಂತೆಯೇ, ಹಳೆಯ ದೈವಸ್ಥಾನ ಜೀರ್ಣೋದ್ಧಾರಗೊಂಡು ಹೊಸ ರೂಪ ಪಡೆದು ನಿಂತಿದೆ.

20 ದಿನಗಳಲ್ಲಿ ನಡೆಯಿತು ಜೀರ್ಣೋದ್ಧಾರ :

ದೈವದ ಅಭಯ ಯುವಕರ ಮೇಲಿತ್ತು. ಇಡೀ ಊರೇ ಅಚ್ಚರಿ ಪಡುವಂತೆ ತಾಯಿಯ ದೈವಸ್ಥಾನದ ಕಾರ್ಯ ನಡೆಯಿತು.  ಕೇವಲ 20 ದಿನಗಳಲ್ಲಿ ಅಪ್ಪೆ ಕಲ್ಲುರ್ಟಿಯ ಕ್ಷೇತ್ರ ತಲೆ ಎತ್ತಿ ನಿಂತಿತು ಅಂದರೆ ನೀವು ನಂಬಲೇ ಬೇಕು. ಕ್ಷೇತ್ರದ ಜೀರ್ಣೋದ್ಧಾರಕ್ಕಾಗಿ ಹಗಲಿರುಳು ಯುವಕರು ಶ್ರಮಿಸಿದ್ದಾರೆ. ಹುಬ್ಬೇರಿಸುವಂತಹ ಕೆಲಸ ಮಾಡಿದ ಶ್ರೀ ಮಣಿಕಂಠ ಯುವಶಕ್ತಿ ತಂಡದ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ಕಾರ್ಯಕ್ರಮಗಳ ವಿವರ :

ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ. ಮೇ.02 ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತ್ರ, ಕಲ್ಪೋಕ್ತ ಪೂಜೆ, ವಾಸ್ತು ಹೋಮಾದಿ ಅಧಿವಾಸ ನಡೆಯಲಿದೆ. ಸಂಜೆ 6.30 ರಿಂದ ‘ನಮ್ಮ ಕುಡ್ಲ’ ವಾಹಿನಿ ಖ್ಯಾತಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ನಡೆಯಲಿದೆ.

ಮೇ.03 ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.

ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ; ಶಾಸಕರು ಭಾಗಿ

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.

Continue Reading

LATEST NEWS

Trending