DAKSHINA KANNADA
Manglore: ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ
ಮಂಗಳೂರಿನ ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂ.21ರಂದು ನಡೆಯಿತು.
ಮಂಗಳೂರು: ಮಂಗಳೂರಿನ ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂ.21ರಂದು ನಡೆಯಿತು.
ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಿಜಿಎಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಧರ್ಮಪಾಲನಾಥ ಸ್ವಾಮೀಜಿ ಹಾಗೂ ಗೌರವ ಅತಿಥಿಯಾಗಿ ಹಾಸನ ಎಸ್ ಡಿ ಎಂ ಆರ್ಯುವೇದ ಮಹಾವಿದ್ಯಾಲಯದ ಬಿಎಎಮ್ ಎಸ್ ನ ಡಾ. ಜಾನ್ವೇಶ್ವರ್ ನಾಯಕ್, ಬಿಜಿಎಸ್ ಸಂಸ್ಥೆಯ ಸುಬ್ಬಕಾರಡ್ಕ ಅತಿಥಿಗಳು ಭಾಗವಹಿಸಿದ್ದರು.
ಭಾಗವಹಿಸಿದ ಅತಿಥಿಗಳು, ಗಣ್ಯರು ಹಾಗೂ ಶಾಲೆಯ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.
DAKSHINA KANNADA
ಇಂದಿನಿಂದ ಮದ್ಯ ಪ್ರಿಯರಿಗೆ ಶಾಕ್..! 3 ದಿನ ಜಿಲ್ಲೆಯಲ್ಲಿ ಮದ್ಯ ಬಂದ್..!
ಮಂಗಳೂರು: ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂ. 01 ರಂದು ಸಂಜೆ 4 ಗಂಟೆಯಿಂದ ಜೂ.3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.
ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.
DAKSHINA KANNADA
ಪುತ್ತೂರು: ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃ*ತ್ಯು
ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ.
ಇದನ್ನೂ ಓದಿ..; ಪುತ್ತೂರು: ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃ*ತ್ಯು
ಮುರದಲ್ಲಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
DAKSHINA KANNADA
ಗ್ಯಾಸ್ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿ..! ತಪ್ಪಿದ ಭಾರೀ ಅನಾಹುತ
ಮಂಗಳೂರು: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು(ಮೇ.31) ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಬಂಟ್ವಾಳ ಅಗ್ನಿಶಾಮಕ ದಳ ಸಿಬಂದಿ, ಸಂಚಾರ ಪೊಲೀಸರು, ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
- LATEST NEWS4 days ago
ಅಭಿಮಾನಿಗಳಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್
- DAKSHINA KANNADA7 days ago
ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್
- LATEST NEWS6 days ago
ಗೂಗಲ್ ಪೇ ಬಳಸ್ತಾ ಇದ್ದೀರಾ? ಜೂನ್ 4ರಿಂದ ಈ ಆ್ಯಪ್ ಕೆಲಸ ಮಾಡಲ್ಲ!
- DAKSHINA KANNADA4 days ago
ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ಕರೆಂಟ್ ಶಾಕ್