Connect with us

    DAKSHINA KANNADA

    ಚಪ್ಪಲಿ ಕಳವು : 112 ಗೆ ಕರೆ ಮಾಡಿದ ಯುವಕ – ತನಿಖೆ ನಡೆಸಿದ ಪೊಲೀಸರು..!

    Published

    on

    ವ್ಯಕ್ತಿಯೋರ್ವನು ತನ್ನ ಚಪ್ಪಲಿ ಕಳವು ಆಗಿದೆ ಎಂದು ಪೊಲೀಸರ ತುರ್ತು ಸ್ಪಂದನಾ ನಂಬರ್ 112 ಗೆ ಕರೆ ಮಾಡಿದ್ದು, ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸಿದ್ದರು.

    ಮಂಗಳೂರು: ವ್ಯಕ್ತಿಯೋರ್ವನು ತನ್ನ ಚಪ್ಪಲಿ ಕಳವು ಆಗಿದೆ ಎಂದು ಪೊಲೀಸರ ತುರ್ತು ಸ್ಪಂದನಾ ನಂಬರ್ 112 ಗೆ ಕರೆ ಮಾಡಿದ್ದು, ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸಿದ್ದರು.

    ಈ ಘಟನೆ ಕಳೆದ ಭಾನುವಾರ ನಡೆದಿತ್ತು.

    ಮಂಗಳೂರು ನಗರದ ಬಾಲಂಭಟ್ ಹಾಲ್‌ನಲ್ಲಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯ ಚಪ್ಪಲಿ ಕಾಣೆಯಾಗಿದ್ದು, ಬಳಿಕ   ಎಷ್ಟೇ ಹುಡುಕಾಡಿದರೂ ಸಿಗದೇ ಇದ್ದಾಗ ಆತ ನೇರವಾಗಿ ಪೊಲೀಸ್ ಕಂಟ್ರೋಲ್ ರೂಂ ನಂಬರ್ 112ಗೆ ಕರೆ ಮಾಡಿ ದೂರಿದ್ದಾರೆ.

    ದೂರು ಬಂದ ಕೂಡಲೇ ಬಂದರು ಠಾಣೆ ಪೊಲೀಸರು ಬಾಲಂಭಟ್‌ ಹಾಲ್‌ಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಚಪ್ಪಲಿ ಕಳೆದುಕೊಂಡ ವ್ಯಕ್ತಿ, ತಾನು ಇಲ್ಲೇ ಚಪ್ಪಲಿ ಇರಿಸಿದ್ದು, ಈಗ ಅದು ನಾಪತ್ತೆಯಾಗಿದೆ.

    ಯಾರೋ ಹಾಕಿಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

    ಬಳಿಕ ಪೊಲೀಸರು ಹಾಲ್‌ನಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಮಾರ್ಕೆಟ್‌ನಿಂದ ಸಾಮಗ್ರಿ ಹಾಕಲು ಬಂದ ವ್ಯಕ್ತಿಯೊಬ್ಬ ಚಪ್ಪಲಿ ಹಾಕಿಕೊಂಡು ತೆರಳಿರುವುದು ಪತ್ತೆಯಾಗಿದೆ.

    ಈ ಹಿನ್ನೆಲೆಯಲ್ಲಿ ಠಾಣೆಗೆ ಬಂದು ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ.

    ಆದರೆ ದೂರು ನೀಡಲು ವ್ಯಕ್ತಿ ನಿರಾಕರಿಸಿದ್ದಾನೆ.

    ಪೊಲೀಸರು ಚಪ್ಪಲಿ ಕಳವು ದೂರಿಗೂ ಕೂಡಲೇ ಸ್ಪಂದಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

    DAKSHINA KANNADA

    ಗುಂಡಿಗೆ ಬಿದ್ದು ಅಟೋ ಚಾಲಕ ಸಾವು..! MCC ಅಧಿಕಾರಿಗಳ ಮೇಲೆ FIR..!

    Published

    on

    ಮಂಗಳೂರು:  ಶುಕ್ರವಾರ ತಡರಾತ್ರಿಯಲ್ಲಿ ಅಟೋ ರಿಕ್ಷಾವೊಂದು ಕೊಟ್ಟಾರ ಬಳಿಯಲ್ಲಿನ ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಚಾಲಕ ಮೃ*ತ ಪಟ್ಟ ಘಟನೆ ನಡೆದಿದೆ.

    ಅಟೋ ರಿಕ್ಷ ಚಾಲಕ ದೀಪಕ್ ಆಚಾರ್ಯ ಎಂಬವರು ಅಟೋ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿತ್ತು. ರಾತ್ರಿ ಧಾರಕಾರವಾಗಿ ಮಳೆ ಸುರಿಯುತ್ತಿದ್ದ ಕಾರಣ ಅಟೋ ಚಾಲಕ ರಸ್ತೆಯಲ್ಲಿದ್ದ ಗುಂಡಿಯನ್ನು ಗಮನಿದೆ ಅಟೋ ಸಹಿತ ಗುಂಡಿಗೆ ಬಿದ್ದಿದ್ದರು. ಕೊಟ್ಟಾರದ ಯಮುನಾ ಪ್ಯಾರಡೈಸ್ ಅಪಾರ್ಟ್‌ಮೆಂಟ್‌ ಬಳಿ ಈ ದುರ್ಘಟನೆ ನಡೆದಿದ್ದು ಚಾಲಕ ದೀಪಕ್ ಆಚಾರ್ಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

    Read More; ಮಂಗಳೂರಿನಲ್ಲಿ ಮೊದಲ ಮಳೆಗೆ ಜೀವ ಬ*ಲಿ; ಆಟೋರಿಕ್ಷಾ ತೋಡಿಗೆ ಬಿದ್ದು ಚಾಲಕ ಸಾ*ವು

    ಈ ಬಗ್ಗೆ ಹೇಮಲತಾ ಎಂಬವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಗರ ಪಾಲಿಕೆಯ ಸಂಬಂಧಿತ ಅಧಿಕಾರಿಗಳು ದೀಪಕ್ ಆಚಾರ್ಯ ಅವರ ಸಾವಿಗೆ ಕಾರಣ ಎಂದು ದೂರಿದ್ದಾರೆ. ರಸ್ತೆಯಲ್ಲಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದೇ ಇದ್ದ ಕಾರಣ ಮಳೆಯಲ್ಲಿ ಈ ಅಪಘಾತವಾಗಿದ್ದು , ಜೀವ ಹಾನಿಗೆ ನಗರಪಾಲಿಕೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.

    Continue Reading

    DAKSHINA KANNADA

    ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್‌ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್

    Published

    on

    ಮಂಗಳೂರು: ಬಾಲಿವುಡ್ ನಟ ಸುನಿಲ್ ಶೆಟ್ಟಿ ತುಳುನಾಡನ್ನು ಹಾಡಿ ಹೊಗಳಿದ್ದಾರೆ.  ಇನ್ಸ್ಟಾಗ್ರಾಮ್ ಖಾತೆಯಲ್ಲಿ ತುಳುನಾಡು ಎಷ್ಟು ಸುಂದರ ಅನ್ನೋ ರೀತಿಯಲ್ಲಿ ಬರೆದು ಪೋಸ್ಟ್ ಮಾಡಿದ್ದರು. ಇದೀಗ ಆ ಪೋಸ್ಟ್ ಅನ್ನು ಅಳಿಯ ಕೆ.ಎಲ್ ರಾಹುಲ್ ರಿ ಪೋಸ್ಟ್ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

    sunil shetty, rahul

    ಸುನಿಲ್ ಶೆಟ್ಟಿ ಕರಾವಳಿ ಮೂಲದವರಾಗಿದ್ದು ಇಲ್ಲಿನ ಆಚಾರ, ವಿಚಾರಗಳನ್ನು ಗೌರವಿಸುತ್ತಾರೆ. ಯಾವುದೇ ಭೂತಕೋಲ, ಧಾರ್ಮಿಕ ಕಾರ್ಯಕ್ರಮಗಳನ್ನು ತಪ್ಪಿಸಿಕೊಳ್ಳದೆ ತಪ್ಪದೆ ಹಾಜರಿರುತ್ತಾರೆ. ಇತ್ತೀಚೆಗೆ ಬಪ್ಪನಾಡಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಸುನಿಲ್ ಶೆಟ್ಟಿ ಭಾಗವಹಿಸಿದ್ದರು. ಮುಂಬೈನಲ್ಲಿ ನೆಲೆಕಂಡಿದ್ದರೂ ಸುನಿಲ್ ಶೆಟ್ಟಿ ಕರಾವಳಿ ಬಗ್ಗೆ ಹೆಚ್ಚು ಅಭಿಮಾನ, ಪ್ರೀತಿ ಇಟ್ಟುಕೊಂಡಿದ್ದಾರೆ.

    ಮಗಳು ಆಥಿಯಾ ಶೆಟ್ಟಿಯನ್ನು ಕನ್ನಡದ ಹುಡುಗ ಕೆ.ಎಲ್ ರಾಹುಲ್‌ ಗೆ ಕೊಟ್ಟು ವಿವಾಹ ಮಾಡಿಕೊಡುವುದರೊಂದಿಗೆ ಕರುನಾಡಿನ ಬಾಂಧವ್ಯವನ್ನು ಮುಂದುವರಿಸಿದ್ದಾರೆ. ಇನ್ನು ಕೆ.ಎಲ್ ರಾಹುಲ್ ಕೂಡಾ ದೈವ ಭಕ್ತರಾಗಿದ್ದು, ಆಗಾಗ ಕರಾವಳಿ ಭಾಗದ ದೇವಸ್ಥಾನಗಳಿಗೆ  ಭೇಟಿ ಕೊಡುತ್ತಾರೆ.

    Read More..; ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮುಲ್ಕಿಯ ಜನಾರ್ಧನ ದೇವಸ್ಥಾನಕ್ಕೆ ಭೇಟಿ

    ಇದೀಗ ಸುನಿಲ್ ಶೆಟ್ಟಿ ಇನ್ಸ್ಟಾಗ್ರಾಮ್ ನಲ್ಲಿ ತುಳುನಾಡಿನ ಕುರಿತು ಬರೆದು ಹಾಕಿದ್ದಾರೆ. ತುಳುನಾಡು ಬಹಳ ಸುಂದರವಾಗಿದೆ. ‘ನಾನು ಹೋಟೆಲ್‌ಗೆ ಹೋಗಿದ್ದಾಗ.. ವೈಟರ್‌ಅನ್ನು ಧಣಿ ಎಂದು ಕರೆದೆ.. ಆ ವೇಳೆ ನನ್ನ ಬಳಿ ಬಂದು ಹೇಳಿ ಧಣಿ ಎಂದು ಕೇಳಿದ್ರು..ಈಗ ನಾವಿಬ್ಬರೂ ಕೂಡಾ ಶ್ರೀಮಂತರಲ್ಲ. ಒಂದು ಅಂಗಡಿ ಹೋದೆ..ಅಂಗಡಿಯವರನ್ನು ಅಣ್ಣಾ ಎಂದು ಕರೆದೆ..ಅವರು ಮರುತ್ತರಿಸಿ ಹೇಳಿ ಅಣ್ಣಾ ಎಂದು ಹೇಳಿದ್ರು. ಅಸಲಿಗೆ ನಾವು ಸಹೋದರರಲ್ಲ. ಮೀನಿನ ಮಾರ್ಕೆಟ್‌ ಗೆ ಹೋದಾಗ ಅವರನ್ನು ಅಮ್ಮಾ ಎಂದು ಕರೆದರೆ ಅವರು ಹೇಳಿ ಮಗು ಎಂದು ಹೇಳುತ್ತಾರೆ. ಅಸಲಿಗೆ ಅವರು ನನ್ನ ತಾಯಿ ಅಲ್ಲ. ಎಲ್ಲದಕ್ಕಿಂತಲೂ ಹೆಚ್ಚಾಗಿ ಇದು ನಮ್ಮ ತುಳುನಾಡಿನ ಶ್ರೀಮಂತ  ಸಂಸ್ಕೃತಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಹರೀಶ್ ಪೂಂಜಾ ಪ್ರಕರಣ : ಶಾಸಕ ಅಂತ ಸುಮ್ಮನೆ ಬಿಡಲು ಆಗುತ್ತದೆಯಾ? : ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

    Published

    on

    ಮಂಗಳೂರು : ದ.ಕ ಜಿಲ್ಲೆಗೆ ಆಗಮಿಸಿರುವ ಸಿಎಂ ಸಿದ್ಧರಾಮಯ್ಯ ವಿಮಾನ ನಿಲ್ದಾಣದಲ್ಲಿ ಹರೀಶ್ ಪೂಂಜಾ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
    ಪ್ರಕರಣದಲ್ಲಿ ಕಾಂಗ್ರೆಸ್‌ ಒತ್ತಡ ಅಂದ್ರೆ ಏನು? ಎಂದು ಪ್ರಶ್ನೆ ಮಾಡಿದ ಸಿಎಂ ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಹರೀಶ್ ಪೂಂಜಾ ವಿರುದ್ಧ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಏಳು ವರ್ಷ ಜೈಲುವಾಸದ ಶಿಕ್ಷೆ ಸಿಗಬಹುದಾದ ಕೇಸ್ ಆಗಿದ್ದು, ಬೇಲೇಬಲ್‌ ಪ್ರಕರಣ ಅಲ್ಲ ಎಂದಿದ್ದಾರೆ.


    ಶಾಸಕ ಅಂತ ಸುಮ್ಮನೆ ಬಿಡಲು ಆಗುತ್ತದೆಯಾ? ಶಾಸಕ ಅಂದ ಮಾತ್ರಕ್ಕೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ಶಾಸಕರು ಯಾರ ಪರವಾಗಿ ಗಲಾಟೆ ಮಾಡಿದ್ದಾರೆ ಅನ್ನೋದು ಇಂಪಾರ್ಟೆಂಟ್. ಹಾಗಾಗಿ ಅವರ ಮೇಲೆ ಎರಡು ಎಫ್‌ಐಆರ್ ದಾಖಲಾಗಿದೆ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending