Connect with us

    DAKSHINA KANNADA

    ಶ್ರೀನಿವಾಸ ಕರಪತ್ರ ಹಂಚುವ ಮೂಲಕ ಮತದಾರರಿಗೆ ಅಮಿಷ-ಅಧಿಕಾರಿಯಿಂದ ನೋಟೀಸ್ ಜಾರಿ

    Published

    on

    ಪುತ್ತೂರು: ಪುತ್ತೂರು: ಚುನಾವಣಾ ಪ್ರಚಾರ ಪತ್ರಿಕೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವದ ಕರ ಪತ್ರದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವರ ಚಿತ್ರ ಹಾಗೂ ಪುತ್ತಿಲ ಪರಿವಾರ ಎಂಬ ಚಿಹ್ನೆಯನ್ನು ಬಳಸುವ ಮೂಲಕ ಮತದಾರರಿಗೆ ಆಮಿಷ ಒಡ್ಡುವ ಕಾರ್ಯ ಮಾಡಲಾಗುತ್ತಿದೆ ಎಂದು ನಗರ ಸಭೆಯ ನೋಡಲ್ ಅಧಿಕಾರಿ ಅಭ್ಯರ್ಥಿಯೊಬ್ಬರಿಗೆ ನೋಟೀಸ್ ಜಾರಿಗೊಳಿಸಿದ್ದಾರೆ.


    ಪುತ್ತೂರು ನಗರಸಭಾ ಉಪಚುನಾವಣೆ ಕಾರ್ಯ ಕಲಾಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಪುತ್ತಿಲ ಪರಿವಾರ ಎಂಬ ಸಂಘಟಣೆಯ ಬೆಂಬಲಿತ ಅಭ್ಯರ್ಥಿಗಳಾದ ಅನ್ನಪೂರ್ಣ ಎಸ್. ಕೆ. ರಾವ್ ಹಾಗೂ ಚಿಂತನ್ ಪಿ. ಎಂಬವರು ಪತ್ರಕಗಳಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಚಿತ್ರವನ್ನು ಹಾಗೂ ಪುತ್ತಿಲ ಪರಿವಾರ ಎಂದು ಚಿಹ್ನೆ ಪ್ರಕಟಿಸುತ್ತಿದ್ದು, ಮತದಾರರ ಮೇಲೆ ಪ್ರಭಾವ ಬೀರುವ ಕೆಲಸವನ್ನು ಮಾಡುತ್ತಿದೆ. ಚುನಾವಣಾಧಿಕಾರಿಗಳನ್ನು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಡಿ.22ಕ್ಕೆ ದೂರು ದಾಖಲಾಗಿರುತ್ತದೆ.
    ಪುತ್ತೂರು 11ನೇ ವಾರ್ಡ್ ನೆಲ್ಲಿಕಟ್ಟೆಯ ವ್ಯಾಪ್ತಿಯಲ್ಲಿ ಚುನಾವಣೆಯಲ್ಲಿ ಸ್ಪರ್ದಿಸುತ್ತಿರುವ ಈ ಸಂದರ್ಭದಲ್ಲಿ ಅಲ್ಲಿನ ಮತದಾರರಿಗೆ ಪುತ್ತಿಲ ಪರಿವಾರದಿಂದ ರಾಜಕೀಯ ದೃಷ್ಟಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಎಂಬ ಕರಪತ್ರ ಹಂಚುವ ಮೂಲಕ ಮತದಾನಕ್ಕೆ ಅಮಿಷ ಒಡುತ್ತಿದ್ದಾರೆ. ಹಣದ ಲಾಭಿಯು ಉಚಿತ ಊಟ, ತಿಂಡಿ ಬಟ್ಟೆ, ದೇವರ ಪ್ರಸಾರ ನೀಡುವ ಆಮಿಷವನ್ನು ಈ ಕಾರ್ಯಕ್ರಮದ ಮುಖಾಂತರ ಪುತ್ತಿಲ ಪರಿವಾರ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ದೂರು ದಾಖಲಾಗಿರುತ್ತದೆ.
    ಫಲಕಗಳನ್ನು ಈ ಕೂಡಲೇ ತೆರವುಗೊಳಿಸ ತಕ್ಕದ್ದು. ಈ ನೋಟೀನು ನೀಡಿದ 24 ಗಂಟೆಯೊಳಗೆ ಕ್ರಮ ಕೈಗೊಂಡು ವರದಿ ಮಾಡುವಂತೆ ಸೂಚಿಸಿದೆ ಎಂದು ಪುತ್ತೂರು ನಗರ ಸಭಾ ಉಪಚುನಾವಣೆ 2023 ಎಂ.ಸಿ.ಸಿ. ನೋಡಲ್ ಅಧಿಕಾರಿಗಳು ಅನ್ನಪೂರ್ಣ ಎಸ್. ಕೆ. ರಾವ್ ಹಾಗೂ ಚಿಂತನ್ ಪಿ. ಅವರಿಗೆ ಡಿ.22ರಂದು ನೋಟೀಸ್ ನೀಡಿದ್ದು, ಪ್ರತಿಯನ್ನು ಪುತ್ತೂರು ನಗರ ಸಭಾ ಚುನಾವಣಾಧಿಕಾರಿ ಹಾಗೂ ಪುತ್ತೂರು ತಹಸೀಲ್ದಾರರಿಗೆ ನೀಡಲಾಗಿದೆ.

    DAKSHINA KANNADA

    ಗುಂಡಿಗೆ ಬಿದ್ದು ಅಟೋ ಚಾಲಕ ಸಾವು..! MCC ಅಧಿಕಾರಿಗಳ ಮೇಲೆ FIR..!

    Published

    on

    ಮಂಗಳೂರು:  ಶುಕ್ರವಾರ ತಡರಾತ್ರಿಯಲ್ಲಿ ಅಟೋ ರಿಕ್ಷಾವೊಂದು ಕೊಟ್ಟಾರ ಬಳಿಯಲ್ಲಿನ ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಚಾಲಕ ಮೃ*ತ ಪಟ್ಟ ಘಟನೆ ನಡೆದಿದೆ.

    ಅಟೋ ರಿಕ್ಷ ಚಾಲಕ ದೀಪಕ್ ಆಚಾರ್ಯ ಎಂಬವರು ಅಟೋ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿತ್ತು. ರಾತ್ರಿ ಧಾರಕಾರವಾಗಿ ಮಳೆ ಸುರಿಯುತ್ತಿದ್ದ ಕಾರಣ ಅಟೋ ಚಾಲಕ ರಸ್ತೆಯಲ್ಲಿದ್ದ ಗುಂಡಿಯನ್ನು ಗಮನಿದೆ ಅಟೋ ಸಹಿತ ಗುಂಡಿಗೆ ಬಿದ್ದಿದ್ದರು. ಕೊಟ್ಟಾರದ ಯಮುನಾ ಪ್ಯಾರಡೈಸ್ ಅಪಾರ್ಟ್‌ಮೆಂಟ್‌ ಬಳಿ ಈ ದುರ್ಘಟನೆ ನಡೆದಿದ್ದು ಚಾಲಕ ದೀಪಕ್ ಆಚಾರ್ಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

    Read More; ಮಂಗಳೂರಿನಲ್ಲಿ ಮೊದಲ ಮಳೆಗೆ ಜೀವ ಬ*ಲಿ; ಆಟೋರಿಕ್ಷಾ ತೋಡಿಗೆ ಬಿದ್ದು ಚಾಲಕ ಸಾ*ವು

    ಈ ಬಗ್ಗೆ ಹೇಮಲತಾ ಎಂಬವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಗರ ಪಾಲಿಕೆಯ ಸಂಬಂಧಿತ ಅಧಿಕಾರಿಗಳು ದೀಪಕ್ ಆಚಾರ್ಯ ಅವರ ಸಾವಿಗೆ ಕಾರಣ ಎಂದು ದೂರಿದ್ದಾರೆ. ರಸ್ತೆಯಲ್ಲಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದೇ ಇದ್ದ ಕಾರಣ ಮಳೆಯಲ್ಲಿ ಈ ಅಪಘಾತವಾಗಿದ್ದು , ಜೀವ ಹಾನಿಗೆ ನಗರಪಾಲಿಕೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.

    Continue Reading

    DAKSHINA KANNADA

    ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್‌ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್

    Published

    on

    ಮಂಗಳೂರು: ಬಾಲಿವುಡ್ ನಟ ಸುನಿಲ್ ಶೆಟ್ಟಿ ತುಳುನಾಡನ್ನು ಹಾಡಿ ಹೊಗಳಿದ್ದಾರೆ.  ಇನ್ಸ್ಟಾಗ್ರಾಮ್ ಖಾತೆಯಲ್ಲಿ ತುಳುನಾಡು ಎಷ್ಟು ಸುಂದರ ಅನ್ನೋ ರೀತಿಯಲ್ಲಿ ಬರೆದು ಪೋಸ್ಟ್ ಮಾಡಿದ್ದರು. ಇದೀಗ ಆ ಪೋಸ್ಟ್ ಅನ್ನು ಅಳಿಯ ಕೆ.ಎಲ್ ರಾಹುಲ್ ರಿ ಪೋಸ್ಟ್ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

    sunil shetty, rahul

    ಸುನಿಲ್ ಶೆಟ್ಟಿ ಕರಾವಳಿ ಮೂಲದವರಾಗಿದ್ದು ಇಲ್ಲಿನ ಆಚಾರ, ವಿಚಾರಗಳನ್ನು ಗೌರವಿಸುತ್ತಾರೆ. ಯಾವುದೇ ಭೂತಕೋಲ, ಧಾರ್ಮಿಕ ಕಾರ್ಯಕ್ರಮಗಳನ್ನು ತಪ್ಪಿಸಿಕೊಳ್ಳದೆ ತಪ್ಪದೆ ಹಾಜರಿರುತ್ತಾರೆ. ಇತ್ತೀಚೆಗೆ ಬಪ್ಪನಾಡಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಸುನಿಲ್ ಶೆಟ್ಟಿ ಭಾಗವಹಿಸಿದ್ದರು. ಮುಂಬೈನಲ್ಲಿ ನೆಲೆಕಂಡಿದ್ದರೂ ಸುನಿಲ್ ಶೆಟ್ಟಿ ಕರಾವಳಿ ಬಗ್ಗೆ ಹೆಚ್ಚು ಅಭಿಮಾನ, ಪ್ರೀತಿ ಇಟ್ಟುಕೊಂಡಿದ್ದಾರೆ.

    ಮಗಳು ಆಥಿಯಾ ಶೆಟ್ಟಿಯನ್ನು ಕನ್ನಡದ ಹುಡುಗ ಕೆ.ಎಲ್ ರಾಹುಲ್‌ ಗೆ ಕೊಟ್ಟು ವಿವಾಹ ಮಾಡಿಕೊಡುವುದರೊಂದಿಗೆ ಕರುನಾಡಿನ ಬಾಂಧವ್ಯವನ್ನು ಮುಂದುವರಿಸಿದ್ದಾರೆ. ಇನ್ನು ಕೆ.ಎಲ್ ರಾಹುಲ್ ಕೂಡಾ ದೈವ ಭಕ್ತರಾಗಿದ್ದು, ಆಗಾಗ ಕರಾವಳಿ ಭಾಗದ ದೇವಸ್ಥಾನಗಳಿಗೆ  ಭೇಟಿ ಕೊಡುತ್ತಾರೆ.

    Read More..; ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮುಲ್ಕಿಯ ಜನಾರ್ಧನ ದೇವಸ್ಥಾನಕ್ಕೆ ಭೇಟಿ

    ಇದೀಗ ಸುನಿಲ್ ಶೆಟ್ಟಿ ಇನ್ಸ್ಟಾಗ್ರಾಮ್ ನಲ್ಲಿ ತುಳುನಾಡಿನ ಕುರಿತು ಬರೆದು ಹಾಕಿದ್ದಾರೆ. ತುಳುನಾಡು ಬಹಳ ಸುಂದರವಾಗಿದೆ. ‘ನಾನು ಹೋಟೆಲ್‌ಗೆ ಹೋಗಿದ್ದಾಗ.. ವೈಟರ್‌ಅನ್ನು ಧಣಿ ಎಂದು ಕರೆದೆ.. ಆ ವೇಳೆ ನನ್ನ ಬಳಿ ಬಂದು ಹೇಳಿ ಧಣಿ ಎಂದು ಕೇಳಿದ್ರು..ಈಗ ನಾವಿಬ್ಬರೂ ಕೂಡಾ ಶ್ರೀಮಂತರಲ್ಲ. ಒಂದು ಅಂಗಡಿ ಹೋದೆ..ಅಂಗಡಿಯವರನ್ನು ಅಣ್ಣಾ ಎಂದು ಕರೆದೆ..ಅವರು ಮರುತ್ತರಿಸಿ ಹೇಳಿ ಅಣ್ಣಾ ಎಂದು ಹೇಳಿದ್ರು. ಅಸಲಿಗೆ ನಾವು ಸಹೋದರರಲ್ಲ. ಮೀನಿನ ಮಾರ್ಕೆಟ್‌ ಗೆ ಹೋದಾಗ ಅವರನ್ನು ಅಮ್ಮಾ ಎಂದು ಕರೆದರೆ ಅವರು ಹೇಳಿ ಮಗು ಎಂದು ಹೇಳುತ್ತಾರೆ. ಅಸಲಿಗೆ ಅವರು ನನ್ನ ತಾಯಿ ಅಲ್ಲ. ಎಲ್ಲದಕ್ಕಿಂತಲೂ ಹೆಚ್ಚಾಗಿ ಇದು ನಮ್ಮ ತುಳುನಾಡಿನ ಶ್ರೀಮಂತ  ಸಂಸ್ಕೃತಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಹರೀಶ್ ಪೂಂಜಾ ಪ್ರಕರಣ : ಶಾಸಕ ಅಂತ ಸುಮ್ಮನೆ ಬಿಡಲು ಆಗುತ್ತದೆಯಾ? : ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

    Published

    on

    ಮಂಗಳೂರು : ದ.ಕ ಜಿಲ್ಲೆಗೆ ಆಗಮಿಸಿರುವ ಸಿಎಂ ಸಿದ್ಧರಾಮಯ್ಯ ವಿಮಾನ ನಿಲ್ದಾಣದಲ್ಲಿ ಹರೀಶ್ ಪೂಂಜಾ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
    ಪ್ರಕರಣದಲ್ಲಿ ಕಾಂಗ್ರೆಸ್‌ ಒತ್ತಡ ಅಂದ್ರೆ ಏನು? ಎಂದು ಪ್ರಶ್ನೆ ಮಾಡಿದ ಸಿಎಂ ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಹರೀಶ್ ಪೂಂಜಾ ವಿರುದ್ಧ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಏಳು ವರ್ಷ ಜೈಲುವಾಸದ ಶಿಕ್ಷೆ ಸಿಗಬಹುದಾದ ಕೇಸ್ ಆಗಿದ್ದು, ಬೇಲೇಬಲ್‌ ಪ್ರಕರಣ ಅಲ್ಲ ಎಂದಿದ್ದಾರೆ.


    ಶಾಸಕ ಅಂತ ಸುಮ್ಮನೆ ಬಿಡಲು ಆಗುತ್ತದೆಯಾ? ಶಾಸಕ ಅಂದ ಮಾತ್ರಕ್ಕೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ಶಾಸಕರು ಯಾರ ಪರವಾಗಿ ಗಲಾಟೆ ಮಾಡಿದ್ದಾರೆ ಅನ್ನೋದು ಇಂಪಾರ್ಟೆಂಟ್. ಹಾಗಾಗಿ ಅವರ ಮೇಲೆ ಎರಡು ಎಫ್‌ಐಆರ್ ದಾಖಲಾಗಿದೆ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending