ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ 10 ಜನ ಉಪನ್ಯಾಸಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ತುಂಗಾ ನದಿಗೆ ಸ್ನಾನಕ್ಕೆ ಇಳಿದಿದ್ದಾರೆ. ಈ ಸಂಧರ್ಭದಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು ಮತ್ತೋರ್ವರ ಮೃತದೇಹ ಶೋಧ ಕಾರ್ಯ ಮುಂದುವರೆದಿದೆ.
ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.